ಬೆಂಗಳೂರು : ಕರೋನಾ ಲಸಿಕೆ ಅಭಿಯಾನದಲ್ಲಿ ಬಿಜೆಪಿ ಪಕ್ಷದ ನಾಯಕರು ಅನವಶ್ಯಕವಾಗಿ ಭಿತ್ತಿಪತ್ರಗಳನ್ನು ಅಳವಡಿಸಿ ಪ್ರಚಾರ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ಪ್ರತಿಭಟನೆ.
ಕರೋನಾ ಲಸಿಕೆ ಅಭಿಯಾನದಲ್ಲಿ ಬಿಜೆಪಿ ಪಕ್ಷದ ನಾಯಕರು ಅನವಶ್ಯಕವಾಗಿ ಭಿತ್ತಿಪತ್ರಗಳನ್ನು ಅಳವಡಿಸಿ ಪ್ರಚಾರ ಪಡೆಯುತ್ತಿದ್ದಾರೆ ಕೂಡಲೇ ಬಿಬಿಎಂಪಿ ಆಯುಕ್ತರು ಇದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಮತ್ತೆ ಕರೋನ ರೋಗವು ಹೆಚ್ಚುತ್ತಿದೆ ಇದನ್ನು ತಡೆಗಟ್ಟಲು ಬಿಬಿಎಂಪಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಜೊತೆಯಲ್ಲಿ ಲಸಿಕೆ ಹಾಕುವ ವೇಳೆ ಬಿಜೆಪಿ ಕಾರ್ಯಕರ್ತರು ಆರೋಗ್ಯ ಕೇಂದ್ರದ ಬಳಿ ಭಿತ್ತಿಪತ್ರಗಳನ್ನು ಅಳವಡಿಸಿ ಕರೋನಾ ಲಸಿಕೆಯನ್ನು ಬಿಜೆಪಿ ಪಕ್ಷದವರೇ ಉಚಿತವಾಗಿ ನೀಡುತ್ತಿದ್ದಾರೆ ಎಂಬಂತೆ ಪ್ರಚಾರವನ್ನೂ ಪಡೆಯುತ್ತಿದ್ದಾರೆ. ಇದರ ಬಗ್ಗೆ ಬಿಬಿಎಂಪಿ ಆಯುಕ್ತರು ಸೂಕ್ತ ಕ್ರಮ ಕೈಗೊಳ್ಳದೇ ಹೋದರೆ ಬಿಬಿಎಂಪಿ ಆಯುಕ್ತರ ಕಚೇರಿ ಮುಂದೆ ಧರಣಿ ನಡೆಸಲಾಗುತ್ತದೆ ಎಂದು ಎಚ್ಚರಿಕೆಯನ್ನು ಪ್ರತಿಭಟನೆ ಮೂಲಕ ನೀಡಲಾಯಿತು.ರಾಜ್ಯ ಹಾಗೂ ನಗರದಲ್ಲಿ ಅತಿ ಹೆಚ್ಚು ಪ್ರಕರಣಗಳು ಸ್ಫೋಟಗೊಂಡ ಸಂದರ್ಭದಲ್ಲಿ ಬಿಜೆಪಿಯವರು ಜನರ ಸಮಸ್ಯೆಗೆ ಕರೋನಾ ರೋಗಕ್ಕೆ ತುತ್ತಾದ ಜನರಿಗೆ ಸಹಾಯ ಮಾಡದೆ ಸರ್ಕಾರವು ಕರೋನಾ ಹೆಸರಿನಲ್ಲಿ ಲೂಟಿ ಮಾಡಿತ್ತು ಈಗ ಜನರು ಹಣ ಸಂದಾಯ ಮಾಡಿ ಚಿಕಿತ್ಸೆ ಪಡೆಯುತ್ತಿದ್ದಾರೆ ಈಗ ಲಸಿಕೆ ಅಭಿಯಾನದಲ್ಲೂ ಸಹ ಬಿಜೆಪಿ ಕೀಳುಮಟ್ಟದ ರಾಜಕೀಯ ಹಾಗೂ ಪ್ರಚಾರ ಗಿಟ್ಟಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ ಕೂಡಲೇ ಬಿಬಿಎಂಪಿ ಆಯುಕ್ತರು ಲಸಿಕೆ ಕೇಂದ್ರಗಳ ಬಳಿ ಸೂಕ್ತ ಗಮನ ಹರಿಸಿ ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ಲಸಿಕೆ ಹಾಕುವ ಅಭಿಯಾನಕ್ಕೆ ಹೆಚ್ಚು ಒತ್ತು ನೀಡಬೇಕೆಂದು ಬಿಬಿಎಂಪಿ ಆಯುಕ್ತರನ್ನು ಇದೇ ಸಂದರ್ಭದಲ್ಲಿ ಒತ್ತಾಯಪಡಿಸಲಾಯಿತು.ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ಈ ಪ್ರತಿಭಟನೆಯನ್ನು ನಡೆಸಲಾಯಿತು ಈ ಸಂದರ್ಭದಲ್ಲಿ ಪಕ್ಷದ ಮುಖಂಡರುಗಳಾದ ಎಸ್. ಮನೋಹರ್ ಜಿ.ಜನಾರ್ದನ್ ಎ. ಆನಂದ್ ಇ.ಶೇಖರ್ ಪ್ರಕಾಶ್ ಆದಿತ್ಯ ಮಹೇಶ್ ಚಂದ್ರಶೇಖರ ಪುಟ್ಟರಾಜು ಪಕ್ಷದ ಮುಖಂಡರುಗಳಾದ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ: ಸಿಸಿಲ್ ಸೋಮನ್