ಬೆಂಗಳೂರು: ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಬಿಜೆಪಿ ಸರಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟಿನ ಆದೇಶ – ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.

ನಮ್ಮ ರಾಜ್ಯಕ್ಕೆ 1200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸುವಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಬಿಜೆಪಿ ಸರಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟಿನ ಆದೇಶವನ್ನು ನಾಡಿನ ನೊಂದ ಜನರೆಲ್ಲರ ಪರವಾಗಿ ನಾನು ಸ್ವಾಗತಿಸುತ್ತೇನೆ.
ಕರ್ನಾಟಕಕ್ಕೆ ನಿತ್ಯ 1600 – 1700 ಮೆಟ್ರಿಕ್ ಟನ್ ಆಮ್ಲಜನಕದ ಅಗತ್ಯವಿದೆ, ಆದರೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನಿಗದಿ ಮಾಡಿದ್ದು 965 ಮೆಟ್ರಿಕ್ ಟನ್ ಮಾತ್ರ. ಇದರಿಂದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ಪ್ರಾಣ ಕಳೆದುಕೊಳ್ಳಲಿದ್ದ ರಾಜ್ಯದ ಸಹಸ್ರಾರು ರೋಗಿಗಳ ಪ್ರಾಣವನ್ನು ಸುಪ್ರೀಂ ಕೋರ್ಟ್ ಉಳಿಸಿದೆ.
ಸುಪ್ರೀಂ ಕೋರ್ಟ್ ತಪರಾಕಿಯಿಂದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಈಗಲಾದರೂ ಬುದ್ದಿ ಕಲಿಯಲಿ. ಜನರ ಪ್ರಾಣದ ಜೊತೆ ಚೆಲ್ಲಾಟವಾಡುವ ಕ್ರೌರ್ಯವನ್ನು ನಿಲ್ಲಿಸಲಿ. ಕರ್ನಾಟಕಕ್ಕೆ ಅಗತ್ಯವಿರುವಷ್ಟು ಪ್ರಮಾಣದ ಆಮ್ಲಜನಕವನ್ನು ತಕ್ಷಣ ಪೂರೈಸಲಿ.
ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಅನ್ನು ಸಂಪೂರ್ಣ ಇಲ್ಲಿಯೇ ಬಳಕೆ ಮಾಡಿಕೊಳ್ಳಲು ಅವಕಾಶ ನೀಡುವಂತೆ ಹಾಗೂ ರಾಜ್ಯಕ್ಕೆ ನೀಡುವ ಆಕ್ಸಿಜನ್ ಪ್ರಮಾಣವನ್ನು 1500 ಮೆಟ್ರಿಕ್ ಟನ್ ಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಹಾಗೂ ರಾಜ್ಯ ಸರ್ಕಾರದ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸುತ್ತೇನೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
