ಬೆಂಗಳೂರು: ಕೋವಿಡ್ ಸೋಂಕಿತರ ಅನುಕೂಲಕ್ಕೆ ಕೆಪಿಸಿಸಿ ಸಹಾಯವಾಣಿ ಮೂಲಕ ಆಂಬುಲೆನ್ಸ್ ವ್ಯವಸ್ಥೆ – ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್.
ಕೋವಿಡ್ ಸೋಂಕಿತರ ಅನುಕೂಲಕ್ಕೆ ಕೆಪಿಸಿಸಿ ಸಹಾಯವಾಣಿ ಮೂಲಕ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ದಿನಾಂಕ 01-05-2021 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಈ ಸೇವೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಉದ್ಘಾಟಿಸಲಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷರು, ಬೆಂಗಳೂರು ಜಿಲ್ಲಾಧ್ಯಕ್ಷರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು ಮುಖಂಡರು ಭಾಗವಹಿಸಲಿದ್ದಾರೆ.
ವರದಿ: ಸಿಸಿಲ್ ಸೋಮನ್