Politics

ಜನರ ಕಷ್ಟದಲ್ಲಿ ಭಾಗಿಯಾಗಲು ಕಾಂಗ್ರೆಸ್ ಸಂಕಲ್ಪ – ಡಿ.ಕೆ. ಶಿವಕುಮಾರ್

ಬೆಂಗಳೂರು: ಜನರ ಕಷ್ಟದಲ್ಲಿ ಭಾಗಿಯಾಗಲು ಕಾಂಗ್ರೆಸ್ ಸಂಕಲ್ಪ – ಡಿ.ಕೆ. ಶಿವಕುಮಾರ್.

‘ಜನರ ಸಂಕಷ್ಟದಲ್ಲಿ ಭಾಗಿಯಾಗಿ, ಅವರ ಧ್ವನಿಯಾಗಲು ಕಾಂಗ್ರೆಸ್ ಸಂಕಲ್ಪ ಮಾಡಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದ ಗಾಯತ್ರಿನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಡವರಿಗೆ ಗುರುವಾರ ಆಹಾರ ಕಿಟ್ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಿಷ್ಟು:

‘ಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ಕಾಂಗ್ರೆಸ್ ರಾಜ್ಯಾದ್ಯಂತ ಇಂತಹ ಅಮೋಘ ಸೇವೆ ಮಾಡುತ್ತಿದೆ. ಬೆಂಗಳೂರಿನ ಹಲವೆಡೆ ನಮ್ಮ ಶಾಸಕರಿಲ್ಲದಿದ್ದರೂ ಬಡವರಿಗೆ ಆಹಾರ ಕಿಟ್ ನೀಡುವ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗಿದ್ದೇನೆ. ನಮ್ಮ ನಾಯಕರು, ಕಾರ್ಯಕರ್ತರು ಕೋಟ್ಯಂತರ ರೂಪಾಯಿ ಸ್ವಂತ ಹಣ ಖರ್ಚು ಮಾಡಿ ಆಹಾರ ಕಿಟ್ ವಿತರಿಸುತ್ತಿದ್ದಾರೆ.

ಅನೇಕ ಕಡೆ 1 ಸಾವಿರ ರೂ. ಆರ್ಥಿಕ ನೆರವು, ಮತ್ತೆ ಕೆಲವು ಕಡೆ ಲಸಿಕೆಗೆ ಹಣ ಕಟ್ಟಿ ನಮ್ಮವರು ನೆರವಾಗುತ್ತಿದ್ದಾರೆ. ನಮಗೆ ರಾಜಕೀಯ ಮುಖ್ಯ ಅಲ್ಲ. ಸರ್ಕಾರದ ಆಹಾರ ಕಿಟ್ ಗಳ ಮೇಲೆ ನಮ್ಮ ಫೋಟೋ ಹಾಕಿಕೊಂಡು ಹಂಚುತ್ತಿಲ್ಲ. ನಮ್ಮ ನಾಯಕರು ಸ್ವಂತ ಹಣದಿಂದ ನೆರವು ನೀಡುತ್ತಿದ್ದು, ಅವರ ಹೃದಯ ಶ್ರೀಮಂತಿಕೆಯನ್ನು ಗಮನಿಸಬೇಕು. ಕಾಂಗ್ರೆಸ್ ಅವರಿಗೆ ಅಭಿನಂದನೆ ಸಲ್ಲಿಸುತ್ತದೆ.

ನಾವು ಲಸಿಕೆಗೆ ಒತ್ತಾಯ ಮಾಡಿದ ಮೇಲೆ ಸರ್ಕಾರ ಉಚಿತ ಲಸಿಕೆ ಘೋಷಿಸಿದೆ. ಅನೇಕ ಖಾಸಗಿ ಆಸ್ಪತ್ರೆಗಳ ಜತೆಗೆ ಕೈಜೋಡಿಸಿ ಲಸಿಕೆಗೆ ತಲಾ ಸಾವಿರ ರೂಪಾಯಿ ವಸೂಲಿ ಮಾಡಿದ್ದಾರೆ. ಲಸಿಕೆಯನ್ನು ನಮ್ಮವರಿಗೆ ನೀಡುವ ಬದಲು ವಿದೇಶಕ್ಕೆ ಕಳುಹಿಸಲಾಗಿತ್ತು.

ಈ ವಿಚಾರವಾಗಿ ನಾವು ಹೋರಾಟ ಮಾಡಿದಾಗ ಕೋರ್ಟ್ ಮಧ್ಯಪ್ರವೇಶಿಸಿತು. ಕೋರೊನಾ ಸಮಯದಲ್ಲಿ ಎಲ್ಲದಕ್ಕೂ ಕ್ಯೂ ನಿಲ್ಲಿಸಲಾಯಿತು. ಬಡವರು ತಮ್ಮ ಚಿನ್ನಾಭರಣ ಅಡವಿಟ್ಟು, ಸಾಲ ಮಾಡಿ, ಆಸ್ಪತ್ರೆಗೆ ಹಣ ಕಟ್ಟಿದ್ದಾರೆ. ಜನ ಆಸ್ಪತ್ರೆಗೆ ಕಟ್ಟಿರುವ ಹಣವನ್ನು ಸರ್ಕಾರ ಹಿಂದಿರುಗಿಸಬೇಕು. ನೋಂದವರಿಗೆ ಪರಿಹಾರ ನೀಡಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಎಲ್ಲ ವಸ್ತುಗಳ ಬೆಲೆ ಹೆಚ್ಚಾಗಿದೆ. ಆದರೆ ಯಾರಿಗಾದರೂ ಆದಾಯ, ವೇತನ ಹೆಚ್ಚಾಗಿದೆಯಾ? ಯಾರಿಗೂ ಇಲ್ಲ. ಇದಕ್ಕೆಲ್ಲ ನೀವು ಸರಿಯಾಗಿ ಪಾಠ ಕಲಿಸಬೇಕು. ನಾವು ನಿಮ್ಮ ಜತೆ ಇದ್ದೇವೆ ಎಂದು ಹೇಳಲು ಇಲ್ಲಿಗೆ ಬಂದಿದ್ದೇವೆ.

ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆ:

ಬಿಜೆಪಿ ಅವರು ಯಡಿಯೂರಪ್ಪ ಅವರನ್ನಾದರೂ ಉಳಿಸಿಕೊಳ್ಳಲಿ, ವಿಶ್ವನಾಥ್ ಅವರನ್ನಾದರೂ ಸಿಎಂ ಮಾಡಲಿ, ಇಲ್ಲ‌ಈಶ್ವರಪ್ಪ ಅವರನ್ನಾದರೂ ಮಾಡಿಕೊಳ್ಳಲಿ. ನಮಗೂ ಅದಕ್ಕೂ ಸಂಬಂಧ ಇಲ್ಲ. ಈ ಸರ್ಕಾರದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಕೊರೊನಾ ಸಮಯದಲ್ಲಿ ಜನರ ಜೀವ ಉಳಿಸಿ, ಸತ್ತವರಿಗೆ ಪರಿಹಾರ ನೀಡಲಿ. ಡೆತ್ ಆಡಿಟ್ ಆಗಬೇಕು. ಸತ್ತವರ ಕುಟುಂಬಕ್ಕೆ ಪರಿಹಾರ ನೀಡಬೇಕು.

ರೈತರು, ಚಾಲಕರು, ವ್ಯಾಪಾರಿಗಳು ಯಾರಿಗೂ ಪರಿಹಾರ ತಲುಪಿಲ್ಲ. ಬಟ್ಟೆ ಹೊಲಿಯುವರು, ಹೊಗೆಯುವವು, ನೇಕಾರು, ಕುಂಬಾರರು, ಸವಿತಾ ಸಮಾಜದವರು ಯಾರಿಗೂ ಪರಿಹಾರ ಸಿಕ್ಕಿಲ್ಲ. ದುಪ್ಪಟ್ಟು ತೆರಿಗೆ ವಸೂಲಿ ಮಾಡುತ್ತಿದ್ದಾರೆ. ಸಾಂಪ್ರದಾಯಿಕ ವೃತ್ತಿ ಉಳಿಸಿಕೊಂಡು ಸ್ವಾಭಿಮಾನ ಕಾಪಾಡಿಕೊಂಡು ಬಂದವರಿಗೆ ನೆರವು ನೀಡಿ. ನಿಮಗೆ ನೆರವು ನೀಡಲು ಆಗದಿದ್ದರೆ ನಮಗೆ ಅವಕಾಶ ನೀಡಿ. ಒಂದು ರೂಪಾಯಿ ಪೋಲಾಗದಂತೆ ನೀಡುತ್ತೇವೆ.

ಕೊರೊನಾ ಸಮಯದಲ್ಲಿ ರಾಜ್ಯ ಸರ್ಕಾರದ ಕಾರ್ಯವನ್ನು ಅರುಣ್ ಸಿಂಗ್ ಅವರು ಹೊಗಳಿರುವುದು ಸಂತೋಷ. ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ 37, ರಾಯಚೂರಿನಲ್ಲಿ 6 ಜನರನ್ನು ಕೊಲೆ ಮಾಡಿದ್ದಾರೆ. ಇದು ಅತ್ಯುತ್ತಮ ಕಾರ್ಯನಾ? ಚಾಮರಾಜನಗರದಲ್ಲಿ 37 ಜನ ಸತ್ತಾಗ ಹೈಕೋರ್ಟ್ ಮಧ್ಯ ಪ್ರವೇಶಿಸಬೇಕಾಯಿತು. ಇದು ಒಂದು ಸರ್ಕಾರನಾ? ಅರುಣ್ ಸಿಂಗ್ ಅವರು ಉತ್ತರಿಸಬೇಕು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.

Click to comment

Leave a Reply

Your email address will not be published.

4 × four =

News is information about current events. News is provided through many different media: word of mouth, printing, postal systems, broadcasting, electronic communication, and also on the testimony of observers and witnesses to events. It is also used as a platform to manufacture opinion for the population.

Contact Info

Address:
D 601  Riddhi Sidhi CHSL
Unnant Nagar Road 2
Kamaraj Nagar, Goreagaon West
Mumbai 400062 .

Email Id: [email protected]

West Bengal

Eastern Regional Office
Indsamachar Digital Media
Siddha Gibson 1,
Gibson Lane, 1st floor, R. No. 114,
Kolkata – 700069.
West Bengal.

Office Address

251 B-Wing,First Floor,
Orchard Corporate Park, Royal Palms,
Arey Road, Goreagon East,
Mumbai – 400065.

Download Our Mobile App

IndSamachar Android App IndSamachar IOS App

© 2018 | All Rights Reserved

To Top
WhatsApp WhatsApp us