ಸಾಗರ-ಹೊಸನಗರ: ನನ್ನ ಸಂಪೂರ್ಣ ಬೆಂಬಲ ನೆಟ್ವರ್ಕ್ ಸಮಸ್ಯೆ ಬಗ್ಗೆ ಹೋರಟ ನೆಡೆಸುತ್ತಿರುವ ಜನರ ಪರವಾಗಿದೆ – ಶಾಸಕ ಹೆಚ್.ಹಾಲಪ್ಪ.
ಶಿಕ್ಷಣ, ಬ್ಯಾಂಕಿಂಗ್, ಪಡಿತರ ಇನ್ನಿತರ ವ್ಯವಹಾರಗಳು ಆನ್ಲೈನ್ ಅವಲಂಬಿತವಾಗಿವೆ. ಆದರೆ ನನ್ನ ಕ್ಷೇತ್ರದಲ್ಲಿ ಶೇ 50% ಭಾಗದಲ್ಲಿ ನೆಟ್ ವರ್ಕ್ ಸಿಗುವುದಿಲ್ಲ. ಈ ಸಮಸ್ಯೆ ಎದುರಿಸುತ್ತಿರುವ ಸಾಗರ-ಹೊಸನಗರ ತಾಲ್ಲೂಕಿನ ಜನರು, ವಿದ್ಯಾರ್ಥಿಗಳು, ವರ್ಕ್ ಫ್ರಂ ಹೋಮ್ ಕರ್ತವ್ಯ ನಿರ್ವಹಿಸುತ್ತಿರುವ ಉದ್ಯೋಗಿಗಳು ತಮ್ಮ ಅಸಹಾಯಕತೆಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ವ್ಯಕ್ತ ಪಡಿಸುತ್ತಿದ್ದಾರೆ. ನೆಟ್ ವರ್ಕ್ ಸಮಸ್ಯೆ ಎದುರಿಸುತ್ತಿರುವ ಮಲೆನಾಡಿಗರು ತಮಗಾಗುತ್ತಿರುವ ನೋವನ್ನು ಬಹಿರಂಗವಾಗಿ ಪ್ರತಿಭಟಿಸುವ ಮೂಲಕ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಸರ್ಕಾರದ ಮೇಲೆ ವ್ಯಕ್ತಪಡಿಸುತ್ತಿದ್ದಾರೆ. ಅವರ ದೃಷ್ಟಿಯಲ್ಲಿ ನಾನು ಒಬ್ಬ ಆರೋಪಿ ಇದರಲ್ಲಿ ಯಾವುದೇ ರೀತಿಯ ತಪ್ಪಿಲ್ಲ.
ಆದರೆ ನನ್ನ ಕರ್ತವ್ಯವನ್ನು ನಾನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ.ಕೋವಿಡ್ ನಿಂದ ಆನ್ಲೈನ್ ಕ್ಲಾಸ್, ವರ್ಕ್ ಫ್ರಂ ಹೋಮ್ ನಿಂದ ಕರ್ತವ್ಯ ನಿರ್ವಹಿಸಿ ಎನ್ನುತ್ತಿರುವ ಸರ್ಕಾರಗಳು ಅದಕ್ಕೆ ಪೂರಕವಾದ ವ್ಯವಸ್ಥೆ ಕಲ್ಪಿಸುವಲ್ಲಿ ವಿಫಲವಾಗಿವೆ. ನಾನು ಈ ಹಿಂದೆ ಅನೇಕ ಬಾರಿ ಈ ಬಗ್ಗೆ ಅಧಿವೇಶನದಲ್ಲಿ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರು ಪ್ರಯೋಜನವಾಗಿಲ್ಲ. ಮುಖ್ಯಮಂತ್ರಿಗಳನ್ನು ಭೇಟಿಯಾಗಿ ನೆಟ್ ವರ್ಕ್ ಸಮಸ್ಯೆ ಬಗ್ಗೆ ಮನವರಿಕೆ ಮಾಡಿದ್ದೇನೆ,ರೈಲ್ವೆ ಯೋಜನೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನುದಾನ ಹಂಚಿಕೊಂಡು ಕಾಮಗಾರಿ ನೆಡೆಸುವಂತೆ. ಟವರ್ ಅಳವಡಿಸುವಲ್ಲಿ ಇದೆ ರೀತಿ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಗಳಿಗೆ ಸಲಹೆ ನೀಡಿದ್ದೇನೆ. ಈ ವಿಚಾರದಲ್ಲಿ ನನ್ನ ಸಂಪೂರ್ಣ ಬೆಂಬಲ ನೆಟ್ವರ್ಕ್ ಸಮಸ್ಯೆ ಬಗ್ಗೆ ಹೋರಟ ನೆಡೆಸುತ್ತಿರುವ ಜನರ ಪರವಾಗಿದೆ.
ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.