ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿರಾದಲ್ಲಿ ಜೆಡಿಎಸ್ ಶಾಸಕ ಸತ್ಯನಾರಾಯಣರವರ ಅಕಾಲಿಕ ಮರಣದಿಂದ ಶಿರಾ ಉಪಚುನಾವಣೆ ನಡೆಯುತ್ತಿದೆ. ಕಳೆದ ಚುನಾವಣೆ ಸಂದರ್ಭದಲ್ಲಿ ಟಿ.ಬಿ ಜಯಚಂದ್ರ ಅಭ್ಯರ್ಥಿ ಆಗಿದ್ದರು. ಆದರೆ ಚುನಾವಣೆಯಲ್ಲಿ ಜಯಚಂದ್ರ ಎರಡನೇ ಸ್ಥಾನಕ್ಕೆ ಬಂದರು. ಕಳೆದ ಚುನಾವಣೆಯಲ್ಲಿ ರಾಜ್ಯದ ಜನ ಯಾರಿಗೂ ಬಹುಮತ ಕೊಡಲಿಲ್ಲ. ಬಿಜೆಪಿ ದೊಡ್ಡ ಪಕ್ಷವಾಗಿ ಮಾರ್ಪಟ್ಟಿತು.ಯಡಿಯೂರಪ್ಪ ಬಹುಮತ ಸಾಬೀತು ಮಾಡಲಾಗಲಿಲ್ಲ. ಹೀಗಾಗಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿದೆವು. ಕುಮಾರಸ್ವಾಮಿಯನ್ನೇ ಸಿಎಂ ಮಾಡಿದೆವು ಆದರೆ ಕುಮಾರಸ್ವಾಮಿಗೆ ಸರ್ಕಾರ ಉಳಿಸಿಕೊಳ್ಳೋಕೆ ಆಗಲಿಲ್ಲ ಎಂದು ವ್ಯಂಗ್ಯ ಮಾಡಿದರು.
ಜೆಡಿಎಸ್ನವರು ಇನ್ನೊಬ್ಬರ ಹೆಗಲ ಮೇಲೆ ಕೂತುಕೊಂಡು ಅಧಿಕಾರಕ್ಕೆ ಬರುವವರು. ಅವರು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರೋರಲ್ಲ. ನನ್ನ ಪ್ರಕಾರ ಜೆಡಿಎಸ್ ಒಂದು ರಾಜಕೀಯ ಪಕ್ಷವೇ ಅಲ್ಲ, ಮೊನ್ನೆ ಕುಮಾರಸ್ವಾಮಿ ಸಿರಾಗೆ ಬಂದು ಅಳುತ್ತಿದ್ದರಂತಲ್ಲ, ಜನಸೇವೆ ಮಾಡ್ತಿನಿ ಅಂತ ಮತ ಕೇಳಬೇಕು.ಅದು ಬಿಟ್ಟು ಅಳ್ತಾ ಏಕೆ ಮಾತನಾಡಬೇಕು. ಹಿಂದಿನಿಂದಲೂ ಇವರದ್ದು ಹೀಗೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದರು.