ಬೆಂಗಳೂರು: ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 1 ಕೋಟಿ ರೂ.ಗಳ ದೇಣಿಗೆ.
ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಮೆ: ಮಾರ್ಕೆಟಿಂಗ್ ಕಮ್ಯುನಿಕೇಶನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ವತಿಯಿಂದ 1 ಕೋಟಿ ರೂ.ಗಳ ದೇಣಿಗೆಯ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಇಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಸ್.ಬಿ.ಪೂಜಾರಿ ಹಸ್ತಾಂತರ ಮಾಡಿದರು. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಉಪಸ್ಥಿತರಿದ್ದರು.
ವರದಿ: ಸಿಸಿಲ್ ಸೋಮನ್