Politics

ಸರ್ಕಾರ ಮೊದಲು ತನ್ನ ಸಲಹೆಗಾರರ ಮಾತು ಕೇಳುತ್ತದೆಯೇ – ಡಿ.ಕೆ ಶಿವಕುಮಾರ್ ಪ್ರಶ್ನೆ

ಬೆಂಗಳೂರು: ಸರ್ಕಾರ ಮೊದಲು ತನ್ನ ಸಲಹೆಗಾರರ ಮಾತು ಕೇಳುತ್ತದೆಯೇ; ಡಿ.ಕೆ ಶಿವಕುಮಾರ್ ಪ್ರಶ್ನೆ.

‘ಲಸಿಕೆ ವಿಚಾರದಲ್ಲಿ ಸರ್ಕಾರ ತನ್ನ ಸಲಹೆಗಾರರಾದ ಗಗನ್ ದೀಪ್ ಕಾಂಗ್ ಅವರ ಮಾತು ಕೇಳಿದರೆ ಸಾಕು, ಪರಿಣಾಮಕಾಯಾಗಿ ಲಸಿಕೆ ವಿತರಣೆ ಮಾಡಬಹುದು. ಆದರೆ ಸರ್ಕಾರ ತನ್ನ ಸಲಹೆಗಾರರ ಮಾತನ್ನು ಒಪ್ಪಲು ಸಿದ್ಧವಿದೆಯೇ?’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಕಾಂಗ್ ಅವರು ಖ್ಯಾತ ವೈರಾಣು ತಜ್ಞರಾಗಿದ್ದು, ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನಲ್ಲಿ ವೈರಾಣು ವಿಜ್ಞಾನ. ವಿಭಾಗದ ಪ್ರೊಫೆಸರ್ ಆಗಿದ್ದಾರೆ. ಕಳೆದ ತಿಂಗಳು ರಾಜ್ಯ ಸರ್ಕಾರ ಇವರನ್ನು ಲಸಿಕೆ ತಾಂತ್ರಿಕ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡಿತ್ತು.

‘ಕಾಂಗ್ ಅವರ ನೇಮಕವಾದಾಗ ಸರ್ಕಾರ ಕಡೆಗೂ ವಿಜ್ಞಾನಿಗಳ ಸಲಹೆ ಪಡೆಯಲು ಮುಂದಾಗಿದೆ ಎಂದು ಭಾವಿಸಿದ್ದೆವು. ಆದರೆ ಸಲಹೆಗಾರರ ಅಭಿಪ್ರಾಯಕ್ಕೂ ಸರ್ಕಾರದ ನಿರ್ಧಾರಗಳಿಗೂ ಹೊಂದಾಣಿಕೆಯೇ ಆಗುತ್ತಿಲ್ಲ. ಹೀಗಾಗಿ ಸರ್ಕಾರ ಕೇವಲ ಪ್ರಚಾರಕ್ಕೆ ಮಾತ್ರ ಸಲಹೆಗಾರರನ್ನು ನೇಮಕ ಮಾಡಿಕೊಂಡಿದೆ ಎಂಬುದು ಸ್ಪಷ್ಟವಾಗುತ್ತಿದೆ’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ ಅವರು ಕೋವಿಡ್ ನಿರ್ವಹಣೆ ವಿಚಾರವಾಗಿ ವ್ಯಕ್ತಪಡಿಸಿರುವ 10 ಅಂಶಗಳನ್ನು ಡಿ.ಕೆ. ಶಿವಕುಮಾರ್ ಅವರು ಉಲ್ಲೇಖಿಸಿದ್ದು, ಕಾಂಗ್ ಅವರ ಅಭಿಪ್ರಾಯಗಳನ್ನು ಸರ್ಕಾರ ಪರಿಗಣಿಸುತ್ತದೆಯೇ ಎಂದು ಪ್ರಶ್ನಿಸಿದ್ದಾರೆ. ಅವರ ಪ್ರಶ್ನಾಂಶಗಳು ಹೀಗಿವೆ:

ಲಸಿಕೆ ಖರೀದಿಯಲ್ಲಿ ವಿಳಂಬ:

ಲಸಿಕೆ ಖರೀದಿ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಮಾಡಬೇಕೇ ಹೊರತು, ರಾಜ್ಯ ಸರ್ಕಾರವಲ್ಲ ಎಂದು ಸಲಹೆಗಾರರು ಅಭಿಪ್ರಾಯಪಟ್ಟಿದ್ದು, ಇದನ್ನು ಸರ್ಕಾರ ಒಪ್ಪುತ್ತದೆಯೇ? ಎಂದು ಕಾಂಗ್ರೆಸ್ ಕೇಳಲು ಬಯಸುತ್ತದೆ. ಇನ್ನು ಕೇಂದ್ರ ಸರಕಾರವು ಜಾಗತಿಕ ಕಂಪನಿಗಳಿಂದ ಲಸಿಕೆ ಖರೀದಿಯಲ್ಲಿ ವಿಳಂಬ ಮಾಡಿದೆ ಎಂಬುದನ್ನಾದರೂ ಸರ್ಕಾರ ಒಪ್ಪಿಕೊಳ್ಳುತ್ತದೆಯೇ?
ಕಾಂಗ್ ಅವರು ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆಯಲ್ಲಿ, ‘ಇಡೀ ವಿಶ್ವ ಮುಂದಿನ ಒಂದು ವರ್ಷದಲ್ಲಿ ಎದುರಾಗುವ ಸವಾಲು ಎದುರಿಸಲು ಲಸಿಕೆ ಖರೀದಿ ಮಾಡುತ್ತಿದೆ. ಆದರೆ ನಮಗೆ ಮಾರುಕಟ್ಟೆಯಲ್ಲಿ ಸದ್ಯದ ಬೇಡಿಕೆಯಷ್ಟು ಮಾತ್ರ ಲಸಿಕೆ ಲಭ್ಯವಾಗುತ್ತಿದೆ. ಹೀಗಾಗಿ ನಾವು ಹೆಚ್ಚಿನ ಪ್ರಮಾಣದ ಲಸಿಕೆ ಖರೀದಿಸಬೇಕು’ ಎಂದಿದ್ದಾರೆ.

ಜಾಗತಿಕ ಟೆಂಡರ್

ಇನ್ನು ಕಾಂಗ್ ಅವರು ಜಾಗತಿಕ ಟೆಂಡರ್ ಅನ್ನು ಸಂಪನ್ಮೂಲದ ವ್ಯರ್ಥ ಎಂದು ಹೇಳಿರುವ ದಾಖಲೆಗಳಿವೆ. ಹಾಗಾದರೆ ಕರ್ನಾಟಕ ಸರ್ಕಾರವು ಜಾಗತಿಕ ಟೆಂಡರ್ ಮೂಲಕ ಲಸಿಕೆ ಖರೀದಿ ನಿರ್ಧಾರದಲ್ಲಿ ಸಲಹೆಗಾರರ ಅಭಿಪ್ರಾಯವನ್ನು ಪರಿಗಣಿಸಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಜಾಗತಿಕ ಟೆಂಡರ್ ಮೂಲಕ ಎಷ್ಟು ಪ್ರಮಾಣದ ಲಸಿಕೆಯನ್ನು, ಯಾವಾಗ ಖರೀದಿ ಮಾಡಲಿದೆ ಎಂಬ ಮಾಹಿತಿ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸುತ್ತದೆ.

ಡಿಸೆಂಬರ್ ಗಡುವು ಬಗ್ಗೆ ಪ್ರಶ್ನೆ

ಕೇಂದ್ರ ಸರ್ಕಾರ ಈ ವರ್ಷ ಡಿಸೆಂಬರ್ ವೇಳೆಗೆ 2 ಕೋಟಿ ಡೋಸ್ ಲಸಿಕೆ ಖರೀದಿ ಮಾಡುವುದಾಗಿ ತಿಳಿಸಿದ್ದು, ಗಗನ್ ದೀಪ್ ಕಾಂಗ್ ಅವರು, ‘ಇದು ವಾಸ್ತವಾಂಶಕ್ಕೆ ದೂರವಾದದ್ದು’ ಎಂದು ಅಭಿಪ್ರಾಯಪಟ್ಟಿದ್ದಾರೆ. ಹಾಗಾದರೆ ರಾಜ್ಯ ಬಿಜೆಪಿ ಸರ್ಕಾರ ತನ್ನ ಸಲಹೆಗಾರರ ಅಭಿಪ್ರಾಯವನ್ನು ಒಪ್ಪುತ್ತದೆಯೇ? ಹಾಗೂ ರಾಜ್ಯದಲ್ಲಿರುವ ಎಲ್ಲ ವಯಸ್ಕರಿಗೂ ಪೂರ್ಣ ಪ್ರಮಾಣದಲ್ಲಿ ಲಸಿಕೆ ನೀಡಲು ಹಾಕಿಕೊಂಡಿರುವ ಕಾಲಮಿತಿಯ ಬಗ್ಗೆ ವಿವರ ನೀಡುತ್ತದೆಯೇ?

ಕೋವ್ಯಾಕ್ಸಿನ್ ಪರಿಣಾಮದ ಅಂಕಿ ಅಂಶ

ಜನವರಿ ತಿಂಗಳಲ್ಲಿ ಕೋವ್ಯಾಕ್ಸಿನ್ ಅಂತಿಮ ಪರೀಕ್ಷೆ ವರದಿ ಪ್ರಕಟವಾಗುವ ಮುನ್ನವೇ ಅದರ ಬಳಕೆಗೆ ಅನುಮತಿ ನೀಡಿದ್ದನ್ನು ಡಾ. ಕಾಂಗ್ ಅವರು ಪ್ರಶ್ನಿಸಿದ್ದರು. ಜತೆಗೆ, ಕೋವ್ಯಾಕ್ಸಿನ್ ಅಂತಿಮ ಪರೀಕ್ಷಾ ವರದಿ ಪ್ರಕಟಿಸಬೇಕು ಎಂದು ಆಗ್ರಹಿಸಿದ್ದರು. ಈ ವಿಚಾರದಲ್ಲಿ ಬಿಜೆಪಿ ಸರ್ಕಾರ ತನ್ನ ಸಲಹೆಗಾರರ ಅಭಿಪ್ರಾಯವನ್ನು ಬೆಂಬಲಿಸುತ್ತದೆಯೇ ಎಂದು ಸರ್ಕಾರವನ್ನು ಕೇಳ ಬಯಸುತ್ತೇವೆ.

2ನೇ ಅಲೆ ಕುರಿತ ಎಚ್ಚರಿಕೆಯ ನಿರ್ಲಕ್ಷ್ಯ

ದೇಶದಲ್ಲಿ ಎರಡನೇ ಅಲೆ ವಿಚಾರವಾಗಿ ಭಾರತ ಸರ್ಕಾರದ ನಿರ್ಲಕ್ಷ್ಯವನ್ನು ಡಾ.ಕಾಂಗ್ ಅವರು ಪ್ರಶ್ನಿಸಿದ್ದರು. ‘ಸೋಂಕು ಹೆಚ್ಚಳದ ಬಗ್ಗೆ ನಾವು ಆರಂಭದಲ್ಲೇ ಗಮನ ಹರಿಸಬೇಕಿತ್ತು. ಕಡೇ ಪಕ್ಷ ಮಾರ್ಚ್ ಆರಂಭದಲ್ಲಾದರೂ ನಾವು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿತ್ತು. ಆದರೆ ನಾವದನ್ನು ಮಾಡಲಿಲ್ಲ’ ಎಂದು ಹೇಳಿದ್ದಾರೆ.

ಅವರನ್ನು ರಾಜ್ಯದ ಲಸಿಕೆ ತಾಂತ್ರಿಕ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡ ನಂತರವೂ ಸರ್ಕಾರ ಮಾರ್ಚ್ ತಿಂಗಳಲ್ಲಿ ಸೋಂಕು ಪ್ರಕರಣ ಹೆಚ್ಚಳದ ವಿಚಾರವಾಗಿ ಅಗತ್ಯ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಿತ್ತು ಎಂಬುದನ್ನು ಸರ್ಕಾರ ಒಪ್ಪಿಕೊಳ್ಳುತ್ತದೆಯೇ?

ಕೋವಿಡ್ ಅನ್ನು ಪೂರ್ಣ ಪ್ರಮಾಣದಲ್ಲಿ ಮಣಿಸಲು ತಂತ್ರಗಾರಿಕೆ ಇದೆಯೇ?

ಗಗನ್ ದೀಪ್ ಕಾಂಗ್ ಅವರು ಸಂದರ್ಶನವೊಂದರಲ್ಲಿ, ‘ನಾವು ಪ್ರಸ್ತುತ ರೀತಿಯಲ್ಲೇ ಸಾಗಿದರೆ ನಿರಂತರವಾಗಿ ಸೋಂಕು ಹರಡುತ್ತಾ ಹೋಗುತ್ತದೆ. ನಂತರ ಅದು ಅತ್ಯಂತ ಮಾರಕ ವೈರಾಣುವಾಗಿ ರೂಪುಗೊಳ್ಳಬಹುದು. ಆಗ ಪ್ರತಿ ವರ್ಷ ಒಂದು ಅಥವಾ ಎರಡು ಅಲೆಗಳನ್ನು ಎದುರಿಸಬೇಕಾಗುತ್ತದೆ’ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಈ ಸಲಹೆಯನ್ನಾದರೂ ಕೇಳುತ್ತದೆಯೇ? ಮಂದಗತಿಯಲ್ಲಿ ಲಸಿಕೆ ಹಾಕುವ ಮೂಲಕ ಸೋಂಕು ಹರಡಲು ಅವಕಾಶ ಕಲ್ಪಿಸಲಾಗುತ್ತಿದೆಯೇ? ಅಥವಾ ಕೋವಿಡ್ ಅನ್ನು ಶಾಶ್ವತವಾಗಿ ಮಣಿಸಲು ಸಮೂಹ ಲಸಿಕೆ ಕಾರ್ಯಕ್ರಮದ ಬಗ್ಗೆ ಸರ್ಕಾರ ಏನಾದರೂ ಯೋಜನೆ ರೂಪಿಸಿದೆಯೇ?

ಅಂಕಿಅಂಶಗಳ ಕೊರತೆ

ಅಂತಿಮವಾಗಿ ಡಾ. ಕಾಂಗ್ ಅವರು, ‘ಭಾರತ ಸರ್ಕಾರ ಸೋಂಕು ಪ್ರಕರಣ ಹಾಗೂ ಲಸಿಕೆ ಕುರಿತ ನೈಜ ಅಂಕಿ ಅಂಶಗಳನ್ನು ಸಂಗ್ರಹಿಸಬೇಕು. ಆಗ ಮಾತ್ರ ಕೋವಿಡ್ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡಲು ಸಾಧ್ಯ’ ಎಂದು ಹೇಳಿದ್ದಾರೆ.
‘ಕಳಪೆ ಅಂಕಿ-ಅಂಶಗಳಿಂದಾಗಿ ಭಾರತದಲ್ಲಿ ಲಸಿಕೆ ಕಾರ್ಯಕ್ರಮದ ಪರಿಣಾಮವನ್ನು ಅಳೆಯಲು ಸಾಧ್ಯವಾಗುತ್ತಿಲ್ಲ’ ಎಂದೂ ತಿಳಿಸಿದ್ದಾರೆ. ಭಾರತದಲ್ಲಿ ಲಸಿಕೆ ಸಾಮರ್ಥ್ಯದ ಬಗ್ಗೆ ಅಧ್ಯಯನ, ಸಮೀಕ್ಷೆ, ವೈಜ್ಞಾನಿಕ ವಿಶ್ಲೇಷಣೆ ನಡೆಸಬೇಕು ಎಂದು ಅವರು ತಿಳಿಸಿದ್ದಾರೆ.

‘ಈ ಎಲ್ಲ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಬಿಜೆಪಿ ನಾಯಕರು ಕಾಳಸಂತೆಯಲ್ಲಿ ಲಸಿಕೆ ಮಾರಿಕೊಳ್ಳಲು ಅವಕಾಶ ನೀಡುವುದನ್ನು ಬಿಟ್ಟು, ಕೋವಿಡ್ ನಿರ್ವಹಣೆ ವಿಚಾರದಲ್ಲಿ ಮೊದಲು ತನ್ನ ಸಲಹೆಗಾರರ ಮಾತನ್ನು ಕೇಳಬೇಕಿದೆ’ ಎಂದು ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.

Click to comment

Leave a Reply

Your email address will not be published.

twenty + four =

News is information about current events. News is provided through many different media: word of mouth, printing, postal systems, broadcasting, electronic communication, and also on the testimony of observers and witnesses to events. It is also used as a platform to manufacture opinion for the population.

Contact Info

Address:
D 601  Riddhi Sidhi CHSL
Unnant Nagar Road 2
Kamaraj Nagar, Goreagaon West
Mumbai 400062 .

Email Id: [email protected]

West Bengal

Eastern Regional Office
Indsamachar Digital Media
Siddha Gibson 1,
Gibson Lane, 1st floor, R. No. 114,
Kolkata – 700069.
West Bengal.

Office Address

251 B-Wing,First Floor,
Orchard Corporate Park, Royal Palms,
Arey Road, Goreagon East,
Mumbai – 400065.

Download Our Mobile App

IndSamachar Android App IndSamachar IOS App

© 2018 | All Rights Reserved

To Top
WhatsApp WhatsApp us