ಶಾಸಕರಾದ ಹೆಚ್.ಹಾಲಪ್ಪ ನವರು ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳೊಂದಿಗೆ ಸಾಗರದ ನೂತನ ಖಾಸಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನೆಡೆಸಿದರು, ನಂತರ ಸಭೆ ನೆಡೆಸಿ, ಮಾರ್ಚ್ 1 ರಿಂದ ಅಧಿಕೃತವಾಗಿ ನೂತನ ಬಸ್ ನಿಲ್ದಾಣದಿಂದ ಬಸ್ ಸಂಚಾರ ಪ್ರಾರಂಭಿಸುವ ಬಗ್ಗೆ ತೀರ್ಮಾನಿಸಲಾಗಿದ್ದು ಸಾರ್ವಜನಿಕರು ಸಹಕರಿಸುವಂತೆ ವಿನಂತಿಸಿದರು.
ಸಾಗರಕ್ಕೆ ಕುಡಿಯುವ ನೀರನ್ನು ಸರಬರಾಜು ಮಾಡಲು ಯಾವುದೇ ವ್ಯತ್ಯಯ ವಾಗದಂತೆ ಕ್ರಮ ಕೈಗೊಳ್ಳಲಾಗಿದ್ದು, 3 ಪಂಪ್ ಸೆಟ್ ಗಳು ಕಾರ್ಯ ನಿರ್ವಹಿಸುತ್ತಿದ್ದು 1.35 ಲಕ್ಷ ನೀರನ್ನು ಲಿಫ್ಟ್ ಮಾಡುವ ಸಾಮರ್ಥ್ಯವಿದೆ ತುರ್ತು ಸಂಧರ್ಭದ ಅನುಕೂಲಕ್ಕೆ ಹೆಚ್ಚುವರಿ 3 ಪಂಪ್ ಸೆಟ್ ಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ, ಮಾರ್ಚ್ 15 ರಿಂದ ಪ್ರತಿನಿತ್ಯ ನಗರಕ್ಕೆ ನೀರನ್ನು ಸರಬರಾಜು ಮಾಡಲು ತೀರ್ಮಾನಿಸಲಾಗಿದೆ.
ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ, ಸಾರ್ವಜನಿಕರ ಅನುಕೂಲಕ್ಕೆ ಮಾರ್ಚ್ 1 ರಿಂದ ಬಸ್ ವ್ಯವಸ್ಥೆ ಕಲ್ಪಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ವರದಿ: ಗೌತಮ್ ಕೆ.ಎಸ್