ಸಾಗರ: ಸಾಗರ ಬಿಜೆಪಿ ಪಕ್ಷದ ಗ್ರಾಮಂತರ ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಹಾಗೂ ಶಿವಮೊಗ್ಗ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಜಾವೀದ್ ಸಾಬ್ ನಿಧನ.
ಜಿಲ್ಲಾ ವಕ್ಫ್ ಬೋರ್ಡ್ ಸಲಹಾ ಸಮಿತಿ ಸದಸ್ಯರು ಸಾಗರದ ನಿವಾಸಿ ಜಾವೀದ್ ಸಾಬ್ ಶಿವಮೊಗ್ಗದ ಮೇಗ್ಗಾನ್ ಆಸ್ಪತ್ರೆಯಲ್ಲಿ ರಾತ್ರಿ12 ಘಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ. ಜಾವೀದ್ ಸಾಬ್ ರವರು ಸಾಗರ ಬಿಜೆಪಿ ಪಕ್ಷದ ಗ್ರಾಮಾಂತರ ಅಲ್ಪಸಂಖ್ಯಾತರ ಮೋರ್ಚಾದ ಅಧ್ಯಕ್ಷರು ಹಾಗೂ ಶಿವಮೊಗ್ಗ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಸದಸ್ಯರಾಗಿದ್ದರು.
ಅವರ ಆತ್ಮಕ್ಕೆ ದೇವರು ಚಿರ ಶಾಂತಿಯನ್ನು ನೀಡಿ, ಕುಟುಂಬ ವರ್ಗದವರಿಗೆ ಹಾಗೂ ಸಹಸ್ರಾರು ಆತ್ಮೀಯರಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಾರತೀಯ ಜನತಾ ಪಾರ್ಟಿ ಸಾಗರ ಗ್ರಾಮಾಂತರ ಮಂಡಲ ಅಧ್ಯಕ್ಷರು ಲೋಕನಾಥ ಬಿ ಸಿ ಮತ್ತು ಪ್ರಧಾನ ಕಾರ್ಯದರ್ಶಿ ಗೌತಮ್ ವಕೀಲರೂ ಮತ್ತು ದೇವೇಂದ್ರಪ್ಪ ರವರು ಸೂಚಿಸಿದರು.
ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.