ಬೆಂಗಳೂರು: ಇದೇನು ಚುನಾಯಿತ ಸರ್ಕಾರವೋ? ಹುಚ್ಚರ ಸಂತೆಯೋ? ಕ್ಷಣ ಕ್ಷಣಕ್ಕೂ ಬದಲಾಗುವ ನಿರ್ಧಾರ- ಮಾರ್ಗಸೂಚಿಗಳು, ಅಘೋಷಿತ ಲಾಕ್ ಡೌನ್, ಅಮಾಯಕ ಜನತೆ ಮೇಲೆ ದೌರ್ಜನ್ಯ.. ಏನಿದು ಮುಖ್ಯಮಂತ್ರಿಯವರೇ, ಆಡಳಿತ ನಡೆಸಲಾಗದಿದ್ದರೆ ಕುರ್ಚಿಬಿಟ್ಟು ತೊಲಗಿ, ಜನರನ್ನು ಯಾಕೆ ಗೋಳು ಹೊಯ್ಕೊಳ್ತೀರಿ?
ಕೊರೊನಾ ಉಲ್ಭಣಗೊಂಡಿರುವುದು ಸರ್ಕಾರದ ನಿರ್ಲಕ್ಷ್ಯ, ನಿಷ್ಕ್ರಿಯತೆ ಮತ್ತು ದುರಾಡಳಿತದಿಂದ. ತಮ್ಮ ವೈಫಲ್ಯ ಮುಚ್ಚಿಹಾಕಲು ಪೊಲೀಸರ ಕೈಗೆ ಲಾಠಿ ಕೊಟ್ಟು ಬೀದಿಗಿಳಿಸಿದರೆ ಕೊರೊನಾ ಓಡಿಹೋಗುವುದೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ?
ಲಾಕ್ ಡೌನ್, ಬಂದ್, ಕರ್ಪ್ಯೂ….. ಇನ್ನೇನೋ, ಯಾವ ನಿರ್ಧಾರ ಕೈಗೊಳ್ಳುವುದಿದ್ದರೂ ಜನರಿಗೆ ಮನವರಿಕೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ಪೂರ್ವಸಿದ್ದತೆಯೊಡನೆ ಮಾಡಿ. ತಟ್ಟೆ ಬಡಿಯುವ, ಕ್ಯಾಂಡಲ್ ಹಚ್ಚುವ ಶೈಲಿಯ ಇಂತಹ ತುಘಲಕ್ ದರ್ಬಾರ್ ಪುನರಾವರ್ತನೆ ಮಾಡಬೇಡಿ.

ವರದಿ: ಸಿಸಿಲ್ ಸೋಮನ್

