ಬೆಂಗಳೂರು : ಟಿ.ವಿ.ಎಸ್ ಮೋಟಾರ್ ಸಂಸ್ಥೆ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ.ಗಳ ದೇಣಿಗೆ.

ಟಿ.ವಿ.ಎಸ್ ಮೋಟಾರ್ ಸಂಸ್ಥೆ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ.ಗಳ ದೇಣಿಗೆಯ ಚೆಕ್ ಅನ್ನು ಹಾಗೂ 3 ಕೋಟಿ ರೂ. ಮೌಲ್ಯದ 100 ಆಕ್ಸಿಜನ್ ಕಾನ್ಸಂಟ್ರೇಟರ್ ಗಳು ಹಾಗೂ ವೈದ್ಯಕೀಯ ಪರಿಕರಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರಿಗೆ ಇಂದು ಹಸ್ತಾಂತರಿಸಲಾಯಿತು.

ಕೋವಿಡ್ ವಿರುದ್ದದ ಹೋರಾಟದಲ್ಲಿ ಸರ್ಕಾರದೊಂದಿಗೆ ಟಿ.ವಿ.ಎಸ್ ಮೋಟಾರ್ ಸಂಸ್ಥೆ ಕೈಜೋಡಿಸಿರುವುದನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದ್ದಾರೆ. ಟಿ.ವಿ.ಎಸ್ ಮೋಟಾರ್ ಸಂಸ್ಥೆ ಉಪಾಧ್ಯಕ್ಷ (ಕಾರ್ಪೊರೇಟ್ ಸಂಬಂಧಗಳು) ಕರುಣಾಕರ ರೆಡ್ಡಿ, ಹಾಗೂ ಸಹ ಉಪಾಧ್ಯಕ್ಷ ಸೇತುರಾಮನ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
