ಚೆನ್ನೈ: ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಮಾರ್ಗಮಧ್ಯೆ ಕಾರಿನಿಂದಿಳಿದ ಕೇಂದ್ರ ಗೃಹಸಚಿವ ಅಮಿತ್ ಶಾ, ತಮ್ಮ ಸ್ವಾಗತಕ್ಕೆ ಸೇರಿದ್ದ ಬಿಜೆಪಿ ಹಾಗೂ ಎಐಎಡಿಎಂಕೆ ಕಾರ್ಯಕರ್ತರತ್ತ ಕೈಬೀಸಿ ನಡೆದರು. ತಮಿಳುನಾಡು ಬಿಜೆಪಿ ಉಸ್ತುವಾರಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಜತೆಗಿದ್ದರು.
ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಾಗಿ ಆಡಳಿತಾರೂಢ ಎಐಎಡಿಎಂಕೆ ಘೋಷಿಸಿದೆ.
ಕಳೆದ ವರ್ಷ ಲೋಕಸಭಾ ಚುನಾವಣೆಯಲ್ಲಿ ಏರ್ಪಟ್ಟಿದ್ದ ಮೈತ್ರಿಯನ್ನು ವಿಧಾನಸಭಾ ಚುನಾವಣೆಗೂ ಮುಂದುವರಿಸಲು ನಿರ್ಧರಿಸಲಾಗಿದೆ’ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಘೋಷಿಸಲಾಯಿತು. ಸರ್ಕಾರಿ ಕಾರ್ಯಕ್ರಮದಲ್ಲಿ ಪಕ್ಷದ ಸಂಯೋಜಕ ಒ. ಪನ್ನೀರ್ಸೆಲ್ವಂ, ಜಂಟಿ ಸಂಯೋಜಕ ಹಾಗೂ ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಈ ನಿರ್ಧಾರ ಪ್ರಕಟಿಸಿದರು. ಮುಂದಿನ ವಿಧಾನಸಭಾ ಚುನಾವಣೆಯು ವಂಶಾಡಳಿತಕ್ಕೆ ಕೊನೆ ಹಾಡಲಿದೆ’ ಎಂದು ಡಿಎಂಕೆ ಹಾಗೂ ಕಾಂಗ್ರೆಸ್ ಪಕ್ಷಗಳನ್ನು ಉಲ್ಲೇಖಸಿ ಹೇಳಿದರು. ಪಳನಿಸ್ವಾಮಿ ಸರ್ಕಾರವನ್ನು ಶ್ಲಾಘಿಸಿದ ಶಾ, ರಾಜ್ಯಕ್ಕೆ ಕೇಂದ್ರ ಸರ್ಕಾರ ನೀಡಿದ ಕೊಡುಗೆಗಳ ಪಟ್ಟಿ ನೀಡಿದರು.
ವರದಿ: ಸಿಸಿಲ್ ಸೋಮನ್