ಬೆಂಗಳೂರು: ಶ್ರೀ ರೇಣುಕಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಮಾನ್ಯ ಮುಖ್ಯಮಂತ್ರಿ ಬಿ.ಎಎಸ್ ಯಡಿಯೂರಪ್ಪ, ಬೇಟಿ ಸಿಗಂದೂರು ದೇವಸ್ಥಾನ ಮುಜರಾಯಿಗೆ ಸೇರ್ಪಡೆ ವಿವಾದಕ್ಕೆ ಅಂತ್ಯ ಹಾಡಿದ ಮುಖ್ಯಮಂತ್ರಿಗಳು. ಸಲಹಾ ಸಮಿತಿಗೆ ರೇಣುಕಾನಂದ ಸ್ವಾಮೀಜಿ ಸೇರ್ಪಡೆ. ಶಾಸಕ ಹೆಚ್.ಹಾಲಪ್ಪ ಹಾಗೂ ರೇಣುಕಾನಂದ ಸ್ವಾಮೀಜಿ ನೇತೃತ್ವದ ನಿಯೋಗದಿಂದ ಸಿ.ಎಂ ಭೇಟಿ.


ಸಿಗಂದೂರು ಗೊಂದಲ ವಿಚಾರ ಕುರಿತಂತೆ ಶಾಸಕ ಹರತಾಳು ಹಾಲಪ್ಪ, ಶ್ರೀ ರೇಣುಕಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಸುಮಾರು 20ವಿವಿಧ ಜನಾಂಗಗಳ ಸ್ವಾಮೀಜಿಗಳ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪಾವರನ್ನು ಬೇಟಿ ಮಾಡಿ ದೇವಾಲಯದಲ್ಲಿ ಸದ್ಯ ಎದ್ದಿರುವ ಮೇಲುಸ್ತುವಾರಿ ಸಮಿತಿ ಕುರಿತ ಗೊಂದಲ ನಿವಾರಣೆ, ಭಕ್ತರ ನೀಡುವ ಹಣಕಾಸು, ದೇಣಿಗೆ ವಿಚಾರದಲ್ಲಿ ಪಾರದರ್ಶಕತೆ ತರುವ ಬಗ್ಗೆ ಪ್ರಮುಖವಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು.
ಇವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ. ದೇವಾಲಯವನ್ನು ಯಾವುದೇ ಕಾರಣಕ್ಕೂ ಮುಜರಾಯಿ ವ್ಯಾಪ್ತಿ ಗೆ ತರುವ ಪ್ರಶ್ನೆಯೇ ಇಲ್ಲ. ಇಲ್ಲಿ ಭಕ್ತರು ನೀಡುವ ಹಣಕಾಸು ವಿಚಾರದಲ್ಲಿ ಪಾರದರ್ಶಕತೆ ತರಬೇಕು ಎಂಬುದು ಭಕ್ತರ ಇಚ್ಚೆಯಾಗಿದ್ದರಿಂದ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಲಹಾ ಸಮಿತಿ ರಚನೆ ಮಾಡಲಾಗಿದೆ. ಈಗ ರಚನೆಯಾಗಿರುವ ಸಮಿತಿಯಲ್ಲಿ ತಮ್ಮ ಮನವಿಯಂತೆ ಈಡಿಗ ಜನಾಂಗಕ್ಕೆ ಸೇರಿದ ಶ್ರೀ ರೇಣುಕಾನಂದ ಸ್ವಾಮೀಜಿಯವರನ್ನು ಸೇರ್ಪಡೆಗೊಳಿಸಲಾಗುವುದು.

ಇವರು ಕೊಡುವ ಸಲಹೆ ಮಾರ್ಗದರ್ಶನವನ್ನು ತೆಗೆದುಕೊಂಡು ಸಮಿತಿ ಕಾರ್ಯ ಕೈಗೊಳ್ಳಲಿದೆ . ಈಗ ರಚನೆಯಾಗಿರುವ ಸಮಿತಿ ಸದ್ಯ ನಾಲ್ಕು ತಿಂಗಳವರೆಗೆ ಮುಂದುವರೆಯಲಿದೆ. ಬಳಿಕ ಸಮಿತಿ ಇರಬೇಕೋ ಅಥವಾ ಅದನ್ನು ಕೈ ಬಿಡಬೇಕೊ ಎಂಬ ಬಗ್ಗೆ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಬಂಜಾರ ಸಮಾಜದ ಸೇವಾಲಾಲ್ ಶ್ರೀ. ಅರೇಮಲ್ಲಾಪುರದ ಪ್ರಣಯಾನಂದ ಸ್ವಾಮೀಜಿ. ಭಗೀರಥ ಮಠದ ಪುರುಷೋತ್ತಮ ಪುರಿ ಸ್ವಾಮೀಜಿ. ಕುಂಚಿಟಿಗ ಗುರುಪೀಠದ ಶಾಂತವೀರ ಸ್ವಾಮಿ.ಹೊಸದುರ್ಗ ಕನಕಗುರು ಪೀಠದ ಈಶ್ವರಾನಂದ ಪುರ ಸ್ವಾಮೀಜಿ. ತಿಗಳರ ಲಕ್ಷ್ಮೀನರಸಿಂಹ ಸ್ವಾಮಿ. ಮಡಿವಾಳರ ಮಾಚಿದೇವ ಶ್ರೀಗಳು. ಗಾಣಿಗರ ಡಾ ಬಸವ ಕುಮಾರ ಸ್ವಾಮೀ. ಚಿತ್ರದುರ್ಗ ದ ಮೇದಾರ ಪೀಠದ ಬಸವ ಛಲವಾದಿ ಸ್ವಾಮಿ ತೀರ್ಥಹಳ್ಳಿ ಮುಖಂಡರಾ ದ ಬೇಗುವಳ್ಳಿ ಸತೀಶ್ ಸೇರಿದಂತೆ ಅನೇಕರು ಹಾಜರಿದ್ದರು.

ವರದಿ: ಹರ್ಷ ಸಾಗರ
