Politics

ವಿಧಾನಪರಿಷತ್ ನಲ್ಲಿ ಸಚಿವರು ಮತ್ತು ಸದಸ್ಯರಿಂದ ನಡೆದಿರುವ ಗೂಂಡಾಗಿರಿ ರಾಜ್ಯದ ಮಾತ್ರವಲ್ಲ – ಮಾಜಿ ಮುಖ್ಯಮಂತ್ರಿಗಳು ಸಿದ್ದರಾಮಯ್ಯ

ಬೆಂಗಳೂರು : ವಿಧಾನಪರಿಷತ್ ನಲ್ಲಿ ಸಚಿವರು ಮತ್ತು ಸದಸ್ಯರಿಂದ ನಡೆದಿರುವ ಗೂಂಡಾಗಿರಿ ರಾಜ್ಯದ ಮಾತ್ರವಲ್ಲ – ಮಾಜಿ ಮುಖ್ಯಮಂತ್ರಿಗಳು ಸಿದ್ದರಾಮಯ್ಯ.

ವಿಧಾನಪರಿಷತ್ ನಲ್ಲಿ ರಾಜ್ಯ ಸರ್ಕಾರದ ಸಚಿವರು ಮತ್ತು ಸದಸ್ಯರಿಂದ ನಡೆದಿರುವ ಗೂಂಡಾಗಿರಿ ರಾಜ್ಯದ ಮಾತ್ರವಲ್ಲ, ದೇಶದ ಸಂಸದೀಯ ಪ್ರಜಾಪ್ರಭುತ್ವ ಇತಿಹಾಸದ ಕಪ್ಪು ಅಧ್ಯಾಯ. ಇದು ಖಂಡಿತ ಸಾಂವಿಧಾನಿಕ ಪ್ರಜಾಪ್ರಭುತ್ವ ಅಲ್ಲ, ಇದು ನರೇಂದ್ರ ಮೋದಿ ಸರ್ಕಾರ ಪ್ರಜಾಪ್ರಭುತ್ವ.

ವಿಧಾನಪರಿಷತ್ ಸಭಾಪತಿಗಳನ್ನು ಅವರ ಕಚೇರಿಯಲ್ಲಿ ಬಲತ್ಕಾರದಿಂದ ಕೂಡಿಹಾಕಿ, ಅವರ ಅನುಮತಿ ಇಲ್ಲದೆ ಉಪಸಭಾಪತಿಗಳನ್ನು ಸಭಾಪತಿ ಪೀಠದ ಮೇಲೆ ಕೂರಿಸಿ ಕಲಾಪ ನಡೆಸಲು ಹೊರಟಿರುವ ರಾಜ್ಯ ಸರ್ಕಾರದ ಸದಸ್ಯರು ಹಾಡಹಗಲೇ ಸಂವಿಂಧಾನಕ್ಕೆ ಅಪಚಾರ ಎಸಗಿದ್ದಾರೆ, ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದ್ದಾರೆ.

ವಿಧಾನಸಭೆ ಮತ್ತು ವಿಧಾನಪರಿಷತ್ ಕಲಾಪ ನಡೆಸಲು ಸರ್ವಸಮ್ಮತಿಯಿಂದ ರಚಿಸಲಾದ ನಿಯಮಾವಳಿಗಳಿವೆ. ರಾಜ್ಯ ಸರ್ಕಾರದ ಸದಸ್ಯರ ಇಂದಿನ ನಡವಳಿಕೆ ಆ ನಿಯಮಾಳಿಗಳಿಗೆ ಅನುಗುಣವಾಗಿತ್ತೇ ಎಂದು ಕಾನೂನು ಸಚಿವ ಜೆ. ಸಿ. ಮಧುಸ್ವಾಮಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯ ಸರ್ಕಾರದ ರಾಜ್ಯದ ಜನತೆಗೆ ತಿಳಿಸಬೇಕು.

ವಿಧಾನ ಪರಿಷತ್ ಸಭಾಪತಿ, ವಿದೇಶ ಪ್ರವಾಸ,ಅನಾರೋಗ್ಯ ಇಲ್ಲವೇ ಇನ್ನುಯಾವುದೋ ಕಾರಣಕ್ಕೋ ಕರ್ತವ್ಯನಿರ್ವಹಣೆ ಮಾಡಲು ಸಾಧ್ಯವಾಗದೆ ಇದ್ದಾಗ ಸಭಾಪತಿಯಾಗಿ ಕಾರ್ಯನಿರ್ವಹಿಸಲು ಅವರು ಉಪಸಭಾಪತಿಯವರಿಗೆ ಅವಕಾಶವನ್ನು ನೀಡಬಹುದೆಂದು ಸದನದ ನಿಯಮಾವಳಿ ಹೇಳಿದೆ. ಇದರ ಪಾಲನೆಯಾಗಿದೆಯೇ? ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ರಾಜ್ಯ ಸರ್ಕಾರದ ವಿಧಾನಪರಿಷತ್ ಸಭಾಪತಿ ವಿರುದ್ದ ಅವಿಶ್ವಾಸ ನಿರ್ಣಯಕ್ಕೆ ನೋಟೀಸ್ ನೀಡಿದ್ದರು. ನಿಯಮಾವಳಿ ಪ್ರಕಾರ ಅದರ ಇತ್ಯರ್ಥಕ್ಕೆ 14 ದಿನಗಳ ಕಾಲಾವಕಾಶ ಇದೆ. ಆದರೆ ನೋಟೀಸ್ ಕ್ರಮಬದ್ದವಾಗಿಲ್ಲ ಎಂದು ಸಭಾಪತಿಯವರು ತಿರಸ್ಕರಿಸಿದ್ದ ಕಾರಣ ಆ ವಿಷಯ ಇಂದಿನ ಅಜೆಂಡಾದಲ್ಲಿ ಇರಲಿಲ್ಲ.

ಅವಿಶ್ವಾಸ ನಿರ್ಣಯ ಅಜೆಂಡಾದಲ್ಲಿ ಸೇರ್ಪಡೆಯಾದ ನಂತರ ಸದನದಲ್ಲಿ ಅದನ್ನು ಕನಿಷ್ಠ ಹತ್ತು ಜನ ಯಾವುದೇ ಚರ್ಚೆ ಇಲ್ಲದೆ ಬೆಂಬಲಿಸಬೇಕು. ಅದರ ಆಧಾರದಲ್ಲಿ ಮುಂದಿನ ಐದು ದಿನಗಳೊಳಗೆ ನಿರ್ಣಯದ ಚರ್ಚೆಗೆ ಸಭಾಪತಿಗಳು ದಿನ ಗೊತ್ತುಪಡಿಸಬೇಕು. ಈ ನಿಯಮ ಪಾಲನೆಯಾಗಿದೆಯೇ? ರಾಜ್ಯ ಸರ್ಕಾರದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ


ರಾಜ್ಯ ಸರ್ಕಾರದ ಸದಸ್ಯರ ಅವಿಶ್ವಾಸ ನಿರ್ಣಯದ ನೊಟೀಸ್ ಸಭಾಪತಿಯವರಿಂದ ತಿರಸ್ಕೃತಗೊಂಡಿದೆ ಮತ್ತು ಅಜೆಂಡಾದಲ್ಲಿಯೂ ಇರಲಿಲ್ಲ. ಹೀಗಿದ್ದಾಗ ಅವರೇ ಉಪಸಭಾಪತಿಯವರನ್ನು ಅಕ್ರಮವಾಗಿ ಪೀಠದಲ್ಲಿ ಕೂರಿಸಿ ತಾವೇ ನಿರ್ಧರಿಸಿದ ಅಜೆಂಡಾ ಮೂಲಕ ಕಲಾಪ ನಡೆಸಲು ಇದೇನು ಬನಾನ ರಿಪಬ್ಲಿಕಾ?

ವಿಧಾನಪರಿಷತ್ ಅಧಿವೇಶನ ನಡೆಸಲು ಸಂಸದೀಯ ವ್ಯವಹಾರಗಳ ಖಾತೆಯ ಕಾರ್ಯದರ್ಶಿಗಳು ಸಭಾಪತಿಯವರಿಗೆ ನೇರವಾಗಿ ಪತ್ರಬರೆದಿದ್ದೇ ಅಕ್ರಮ ನಡವಳಿಕೆ. ಹೀಗಿದ್ದರೂ ಸಭಾಪತಿಗಳು ಸಂಘರ್ಷಕ್ಕಿಳಿಯದೆ ಸೌಜನ್ಯಪೂರ್ವಕವಾಗಿ ಅಧಿವೇಶನ ಕರೆದಿದ್ದಾರೆ. ಈ ಸೌಜನ್ಯವೇ ತಪ್ಪಾಯಿತೇ?

ನಿಯಮಾವಳಿಯಂತೆ ಸದನದಲ್ಲಿ ಕೋರಮ್ ಬಗ್ಗೆ ಮಾರ್ಷಲ್ ಗಳಿಂದ ದೃಡೀಕರಿಸಿಕೊಂಡ ನಂತರ ಸೂಚನಾ ಗಂಟೆ ನಿಲ್ಲಿಸಲು ತಿಳಿಸಿ ಸಭಾಪತಿಗಳು ಬಂದು ಪೀಠವನ್ನು ಅಲಂಕರಿಸಬೇಕಾಗುತ್ತದೆ. ಇಂದು ಸೂಚನಾಗಂಟೆ ನಿಲ್ಲಿಸುವ ಮೊದಲೇ ರಾಜ್ಯ ಸರ್ಕಾರದ ಸದಸ್ಯರು ಉಪಸಭಾಪತಿಯವರನ್ನು ಕೂರಿಸಿ ಕಲಾಪ ನಡೆಸಲು ಹೊರಟಿದ್ದು ಅಕ್ರಮ‌ ಅಲ್ಲವೇ?

ರಾಜ್ಯದ ಸಚಿವರಾದ ಡಿಸಿಎಂ ಡಿಸಿಎಂ ಅಶ್ವಥ್ ನಾರಾಯಣ್ ಅವರು ಖುದ್ದಾಗಿ ಸಭಾಪತಿ ಪೀಠದಲ್ಲಿ ಉಪಸಭಾಪತಿಯವರನ್ನು ಅಕ್ರಮವಾಗಿ ಕೂರಿಸ್ತಾರೆ, ಕಾನೂನು ಸಚಿವ ಜೆ. ಸಿ. ಮಧುಸ್ವಾಮಿ ಸದನದಲ್ಲಿ ಮಾರ್ಷಲ್ ಗಳಿಗೆ ಧಮಕಿ ಹಾಕ್ತಾರೆ. ತಮ್ಮ ಪಕ್ಷದ ಸದಸ್ಯರನ್ನು ಗೂಂಡಾಗಿರಿಗೆ ಪ್ರಚೋದಿಸುವ ಇವರು ಸಚಿವರಾಗಲು ಅರ್ಹರೇ?

ವಿಧಾನಪರಿಷತ್ ನಲ್ಲಿ ಇಂದು ನಡೆದಿರುವ ಘಟನಾವಳಿಗಳು ರಾಜ್ಯ ಸರ್ಕಾರದ ಮತ್ತು ಜನತಾ ದಳ ಸದಸ್ಯರು ಕೂಡಿ ನಡೆಸಿರುವ ಯೋಜಿತ ಷಡ್ಯಂತ್ರ. ಇದರಿಂದ ಬಿಜೆಪಿ ಮತ್ತು ಜೆಡಿ (ಎಸ್) ನಡುವಿನ ಒಳಒಪ್ಪಂದ ಬಯಲಾಗಿದೆ. ಇದಕ್ಕಾಗಿ ಎರಡೂ ಪಕ್ಷಗಳ ನಾಯಕರು ರಾಜ್ಯದ ಜನತೆಯ ಕ್ಷಮೆ ಕೇಳಬೇಕು.

ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ವಿಧಾನಪರಿಷತ್ ನಲ್ಲಿ ನಡೆದ ಘಟನಾವಳಿಗಳನ್ನು ನಿಷ್ಪಕ್ಷಪಾತವಾಗಿ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಆಶಯಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಭರವಸೆ ನಮಗಿದೆ.

ವರದಿಸಿಸಿಲ್ ಸೋಮನ್

News is information about current events. News is provided through many different media: word of mouth, printing, postal systems, broadcasting, electronic communication, and also on the testimony of observers and witnesses to events. It is also used as a platform to manufacture opinion for the population.

Contact Info

Address:
D 601  Riddhi Sidhi CHSL
Unnant Nagar Road 2
Kamaraj Nagar, Goreagaon West
Mumbai 400062 .

Email Id: [email protected]

West Bengal

Eastern Regional Office
Indsamachar Digital Media
Siddha Gibson 1,
Gibson Lane, 1st floor, R. No. 114,
Kolkata – 700069.
West Bengal.

Office Address

251 B-Wing,First Floor,
Orchard Corporate Park, Royal Palms,
Arey Road, Goreagon East,
Mumbai – 400065.

Download Our Mobile App

IndSamachar Android App IndSamachar IOS App

© 2018 | All Rights Reserved

To Top
WhatsApp WhatsApp us